Author
Shobha Rao
ಶೋಭಾ ರಾವ್ ಮಲೆನಾಡಿನ ತೀರ್ಥಹಳ್ಳಿಯವರು. ಚಿಕ್ಕಂದಿನಿಂದ ಓದುವ, ಬರೆಯುವ ಹವ್ಯಾಸ. ಕನ್ನಡದ ಹಲವಾರು ಪತ್ರಿಕೆಗಳಿಗೆ ಅಂಕಣಗಳನ್ನು ಬರೆದಿದ್ದಾರೆ. ಅಂಕಣಗಳ ಮೂಲಕ ಶುರುವಾದ ಪಯಣ ಕಾದಂಬರಿಯವರೆಗೆ ಬಂದು ನಿಂತಿದೆ. ಈವರೆಗೆ ಎರಡು ಚಾರಿತ್ರಿಕ ಕಾದಂಬರಿ ಹಾಗೂ ಎರಡು ಪ್ರಬಂಧ ಸಂಕಲನಗಳು ಪ್ರಕಟವಾಗಿವೆ. ಕೃತಿಗಳು: ಮಹಾ ಮಾರಣಹೋಮ!, ಧೃತಿಗೆಡದ ಹೆಜ್ಜೆಗಳು, ಕ್ಷತ್ರಿಯ ಕುಲಾವತಂಸ, ಹನಿ ಕಡಿಯದ ಮಳೆ.